IMG-20240430-WA0032

ಜನರ ಜೀವನ ಮಟ್ಟ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ- ಡಾ.ಬಸವರಾಜ

ಕರುನಾಡ ಬೆಳಗು ಸುದ್ದಿ

ಕುಷ್ಟಗಿ, 30- ವಿಶ್ವಮಾನ್ಯ ನರೇಂದ್ರ ಮೋದಿ ಅವರ ಜನಪರ ಯೋಜನೆಗಳು ಅಸಂಖ್ಯಾತ ಭಾರತೀಯರ ಜೀವನವನ್ನು ಬದಲಾಯಿಸಿವೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ. ಶರಣಪ್ಪ ಹೇಳಿದರು.

ವಿಧಾನಸಭಾ ಕ್ಷೇತ್ರದ ಬಿಜಕಲ್ ಮಹಾಶಕ್ತಿ ಕೇಂದ್ರದ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿಸುವ ಗುರುತ್ತರ ಜವಾಬ್ದಾರಿ ನಮ್ಮ ಮೇಲಿದೆ. ಚುನಾವಣೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲೂ ಕೂಡಾ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಮೂಲಕ ಮೋದಿಜೀ ಮತ್ತು ನನಗೆ ಆಶೀರ್ವದಿಸಿ ಎಂದು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಕುಷ್ಟಗಿ ಮತಕ್ಷೇತ್ರದ ಶಾಸಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್ ಪಾಟೀಲ, ವಿಧಾನ ಪರಿಷತ ಸದಸ್ಯೆ ಹೇಮಲತಾ ನಾಯಕ, ಮುಖಂಡರಾದ ದೇವೆಂದ್ರಪ್ಪ ಬಳೂಟಗಿ, ಸಿ.ಎಮ್.ಹಿರೇಮಠ, ಗೌಡಪ್ಪಗೌಡ ಪಾಟೀಲ, ಸಿದ್ದನಗೌಡ ಮಾಲಿಪಾಟೀಲ, ಶರಣಪ್ಪ ತಳುವಗೇರಿ, ನೀಲಕಂಠಪ್ಪ ಕಮ್ಮಾರ, ರುದ್ರಯ್ಯ ಮಠಪತಿ, ಕುಂಠೆಪ್ಪ ತಳವಾರ ಸೇರಿದಂತೆ ಉಭಯ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!