
ಕಿನ್ನಾಳ ಗ್ರಾಮದಲ್ಲಿ ಬೆಳಕಿನ ನಡಿಗೆ(ಕ್ಯಾಂಡಲ್ ಲೈಟ್) ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 30- ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿನ್ನಾಳ ಗ್ರಾಮದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಕುರಿತು ಬೆಳಕಿನ ನಡಿಗೆ(ಕ್ಯಾಂಡಲ್ ಲೈಟ್) ಕಾರ್ಯಕ್ರಮ ಜರುಗಿತು.
ಕ್ಯಾಂಡಲ್ ಲೈಟ್ ಜಾಥಾ:- ಗ್ರಾಮದ ಬಸವೇಶ್ವರ ಸರ್ಕಲ್ ನಿಂದ ಪ್ರಾರಂಭವಾದ ಜಾಥಾ ಮುಖ್ಯರಸ್ತೆಯಿಂದ ಸಾಗಿ ಗ್ರಾಮ ಪಂಚಾಯತಿಯ ಹತ್ತಿರ ಇರುವ ಸ್ವಾಮಿ ವಿವೇಕಾನಂದ ಸರ್ಕಲ್ ವರೆಗೆ ಸಾಗಿ ಮುಕ್ತಾಯಗೊಂಡಿತು.
ಮೆಣದ ಬತ್ತಿಯಿಂದ ಮೊಳಗಿದ ನಮ್ಮ ಮತ, ನಮ್ಮ ಹಕ್ಕು : ಗ್ರಾಮದ ದೇವಾಂಗ ಸಮುದಾಯ ಭವನದಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂಬ ಅಕ್ಷರಗಳನ್ನು ಬಿಡಿಸಿ ಅದರ ಸುತ್ತಲೂ ಮೆಣಬತ್ತಿಗಳಿಂದ ಬೆಳಕು ಜಗಮಗಿಸಿತು.
ನಂತರ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾ ರಾಯಭಾರಿಗಳಾದ ಡಾ.ಶಿವಕುಮಾರ ಮಾಲಿಪಾಟೀಲ್ ಮಾತನಾಡಿ ನಾವು ಕಡ್ಡಾಯವಾಗಿ ಮತದಾನ ಮಾಡಬೇಕು. ವಿಶೇಷಚೇತನರು ಮತದಾನ ಮಾಡಿ ಕರ್ತವ್ಯ ಪ್ರಜ್ಞೆ ಮೆರೆಯುತ್ತಿದ್ದಾರೆಎ. ನಾವು ಕೂಡಾ ದೈಹಿಕವಾಗಿ ಸಬಲರಾಗಿದ್ದು ದೇಶಕ್ಕೆ ಕೊಡುಗೆ ನೀಡಬೇಕಾದರೆ ಮತದಾನವು ಕೂಡಾ ಪ್ರಾಮುಖ್ಯವಾದದ್ದು ಎಂದರು.
ನಂತರ ಜಿಲ್ಲಾ ಚುನಾವಣಾ ರಾಯಭಾರಿ ಮೆಹಬೂಬ ಕಿಲ್ಲೆದಾರ ಚುನಾವಣಾ ಗೀತೆಗಳನ್ನು ಪ್ರಚುರಪಡಿಸಿದರು.
ಮತದಾನ ಪ್ರತಿಜ್ಞಾ ವಿಧಿಯನ್ನು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಚುನಾವಣಾ ರಾಯಭಾರಿಗಳಾದ ಪೂರ್ಣಿಮಾ ಯೋಳುಬಾವಿ, ಕುಮಾರಿ ರಮ್ಯ ಇವರ ನನ್ನ ಮತ, ನನ್ನ ಹಕ್ಕು ಎಂಬ ಮತದಾನ ಜಾಗೃತಿಯ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ.ಶೈಲ್ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ, ಸಿಡಿಪಿಒ ಜಯಶ್ರೀ, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ, ತಾಲೂಕ ಸ್ವೀಪ್ ನೋಡಲ್ ಅಧಿಕಾರಿ ಹನಮಂತಪ್ಪ, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಪಂಚಾಯತ ರಾಜ್ ಸಹಾಯಕ ನಿರ್ದೇಶಕ ಮಹೇಶ್, ಪಂಚಾಯತ ಅಭಿವೃದ್ದಿ ಅಧಿಕಾರಿ ಪರಮೇಶ್ವರಯ್ಯ ತೆಳಗಡೆಮಠ, ಜಿಲ್ಲಾ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ, ತಾಲೂಕ ಸ್ವೀಪ್ ಸಮಿತಿಯ ಸದಸ್ಯರಾದ ಬಸವರಾಜ ಬಳಿಗಾರ, ವಿರೇಶ್ ಬಡಿಗೇರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವೀತಿಯ ದರ್ಜೆ ಲೆಕ್ಕಾಧಿಕಾರಿಗಳು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮತ್ತಿತರು ಹಾಜರಿದ್ದರು.