ಮಹಾತ್ಮಾ ಗಾಂಧಿ ನರೇಗಾ ಯೋಜನೆ
ಜಾಬಕಾರ್ಡಗಳಿಗೆ ಇ-ಕೆವೈಸಿ ಕಡ್ಡಾಯ
ಕೊಪ್ಪಳ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ:- ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ ಕಾರ್ಡಗಳಲ್ಲಿರುವ ಎಲ್ಲಾ ಸದಸ್ಯರು ಸೆಪ್ಟೆಂಬರ್, 30ರ ಒಳಗಾಗಿ ಇ-ಕೆವೈಸಿ ಹೊಂದುವದು ಕಡ್ಡಾಯವಾಗಿದೆ ಎಂದು ಕೊಪ್ಪಳ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ್ದು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿರುವ ಸಿಬ್ಬಂದಿಗಳು, ಬೇರ್ಫೂಟ್ ಟೆಕ್ನಿಷಿಯನ್ ಗಳು, ಜಿಕೆಎಂಗಳಿಗೆ ತರಬೇತಿ ನೀಡುವ ಮೂಲಕ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮೊದಲನೇ ಹಂತದಲ್ಲಿ ಪ್ರಾಯೋಗಿಕವಾಗಿ ತುಮಕೂರು, ಕೊಪ್ಪಳ, ಕೋಲಾರ, ಹಾಸನ ಹಾಗೂ ಹಾವೇರಿ ಜಿಲ್ಲೆಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಆಯ್ಕೆ ಮಾಡಿಕೊಳ್ಳಲಾಗಿದ್ದು, ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಪ್ರತಿಯೊಬ್ಬರ ಏಣಿಕೆ ಮೂಲಕ ಎನ್ ಎಂ ಎಂ ಎಸ್ ಹಾಜರಾತಿ ಸಂಖ್ಯೆ ಆನ್ಲೈನ್ ತೆಗೆದುಕೊಳ್ಳುತ್ತಿದ್ದು ಇ-ಕೆವೈಸಿ ಹೊಂದಿರುವರು ಅವರ ಹಾಜರಾತಿ ತೆಗೆದುಕೊಳ್ಳುವಾಗ ಅವರ ಆಧಾರ್ ನಂಬರ್ ಮತ್ತು ಸ್ಥಳದಲ್ಲಿ ಹಾಜರಿದ್ದವರ ಮುಖ ಹೊಂದಾಣಿಕೆಯಾಗಿದ್ದಲ್ಲಿ ಮಾತ್ರ ಅವರ ಎನ್ ಎಂ ಎಂ ಎಸ್ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ ಒಟ್ಟು 111030 ಸಕ್ರೀಯ(Active) ಕೂಲಿಕಾರರಿದ್ದು ಇಲ್ಲಿಯವರೆಗೆ 43849 ಕೂಲಿಕಾರರು ಇ-ಕೆವೈಸಿ ಹೊಂದಿದ್ದು 67181 ಕೂಲಿಕಾರರು ಇ-ಕೆವೈಸಿ ಹೊಂದುವದು ಬಾಕಿ ಇರುತ್ತದೆ. ಈಗಾಗಲೇ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಐಇಸಿ ಕಾರ್ಯಕ್ರಮಗಳಾದ ಮೈಕ್ ಮೂಲಕ, ಸ್ವಚ್ಛ ವಾಹಿನಿಯ ಮೂಲಕ ಪ್ರಚಾರ ಕೈಗೊಂಡಿದ್ದು ತಾಲೂಕಿನಲ್ಲಿ 67181 ಕೂಲಿಕಾರರು ಇ-ಕೆವೈಸಿ ಹೊಂದುವದು ಬಾಕಿ ಇರುವದರಿಂದ ಪ್ರತಿಯೊಬ್ಬ ನರೇಗಾ ಕೂಲಿಕಾರರು ತಪ್ಪದೇ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಹೊಂದುವುದು.
ಇ-ಕೆವೈಸಿ ಮಾಡಿಸದೇ ಇರುವಂತಹ ಕೂಲಿಕಾರರ NMMSನಲ್ಲಿ ಹಾಜರಾತಿಯನ್ನು ಅಕ್ಟೋಬರ್, 01 ರಿಂದ ಆನ್ ಲೈನ್ ನಲ್ಲಿ ತೆಗೆದುಕೊಳ್ಳುವದಿಲ್ಲ.ತುರ್ತಾಗಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಎಲ್ಲಾ ಕೂಲಿಕಾರರು ನಿಮ್ಮ ಆಧಾರ ಕಾರ್ಡ ಹಾಗು ಜಾಬಕಾರ್ಡನೊಂದಿಗೆ ನಿಮ್ಮ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಹೊಂದಬೇಕೆಂದು ವಿನಂತಿಸಿದ್ದಾರೆ.
