
ಪಂಚ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ
ಪ್ರತಿಭಟನೆ ಮೂಲಕ ಜೆ ಡಿ (ಎಸ್) ಆಗ್ರಹ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 06 – ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಈ ಯೋಜನೆಗಳನ್ನು ಸರಿಯಾಗಿಅನುಷ್ಠಾನಗೊಳಿಸದೆ ಜನರಿಗೆ ವಂಚಿಸಿದೆ. ಹೀಗಾಗಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕೆಂದು ಎಂದು ಜೆ ಡಿ (ಎಸ್) ನಾಯಕರು ಆಗ್ರಹಿಸಿದರು.
ಅವರು ನಗರದ ಗುರುವಾರ ದಂದು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಾಡೆಸಿ ತಹಶಿಲ್ದಾರರ ಮೂಲಕ ಸರ್ಕಾರ ಕ್ಕೆ ಮನವಿ ಸಲ್ಲಿಸಿದರು .
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸುರೇಶ ಭೂಮರೆಡ್ಡಿ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಗೃಹಲಕ್ಷ್ಮಿ, ಗ್ರಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ.ಅನುಷ್ಠಾನದಲ್ಲಿನ ವೈಫಲ್ಯವನ್ನು ಖಂಡಿಸಿ ಬಸವೇಶ್ವರ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ವಿದ್ಯುತ್ ಸರಬರಾಜು ಸಮರ್ಪಕವಾಗಿಲ್ಲ. ವಿದ್ಯುತ್ ದರವನ್ನು ಏರಿಸಲಾಗಿದೆ. ಉಚಿತ ಕೊಡುಗೆಗಳಿಗೆ ವಿದ್ಯುತ್ ಖರ್ಚುಗಳನ್ನು ಸಂಬಂಧಪಟ್ಟ ವಿತರಣಾ ಕಂಪನಿಗಳಿಗೆ ಪಾವತಿಸಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ 7,517 ಕೋಟಿ ರೂಪಾಯಿ ಪಾವತಿ ಬಾಕಿ ಇದೆ. ಚುನಾವಣೆ ಇದ್ದಾಗ ಮಾತ್ರ ನಗದು ವರ್ಗಾವಣೆಯಾಗುತ್ತದೆ.
ಸಚಿವರೊಬ್ಬರು ದುಡ್ಡು ಕೊಡಲು ಇದೇನು ವೇತನವಲ್ಲ ಎಂಬ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5,786 ಕೋಟಿ ರೂಪಾಯಿ ಬಾಕಿ ಇಡಲಾಗಿದೆ. ಯುವ ನಿಧಿ ಯೋಜನೆ ಅನುಷ್ಠಾನ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ನಂತರ ಜೆಡಿಎಸ್ ಜಿಲ್ಲಾ ವಕ್ತಾರ ಮಲ್ಲನಗೌಡ ಮಾತನಾಡಿ ಮೈಕ್ರೋ ಫೈನಾನ್ಸ್ ಸಾಲ ವಸೂಲಿ ಭಾದೆಯಿಂದ ಲಕ್ಷಾಂತರ ಕುಟುಂಬಗಳು ತುತ್ತಾಗಿವೆ. ಹಾಲಿನ, ದರ, ಬಸ್ ದರ, ವಿದ್ಯುತ್ ದರ ಏರಿಸಿ ಮಧ್ಯಮ ವರ್ಗದವರಿಗೆ ಅನ್ಯಾಯ ಮಾಡಲಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಹ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾದಕ ವಸ್ತು ಮಾರಾಟ ಹೆಚ್ಚಾಗಿದೆ. ಅಪರಾಧಗಳು ನಿಯಂತ್ರಣ ತಪ್ಪಿವೆ. ಕಿಡಿಗೇಡಿಗಳು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂದು ಆರೋಪಿಸಿದರು. ಗಾಢ ನಿದ್ರೆಯಲ್ಲಿರುವ ಕಾಂಗ್ರೆಸ್ ಸರಕಾರಕ್ಕೆ ಚಾಟಿ ಏಟು ಬೀಸಬೇಕು. ಗ್ಯಾರಂಟಿ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿದರು.ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ವಿಠ್ಠಲ್ ಚೌಗಲೇ ಪ್ರತಿಭಟನಕಾರರಿಂದ ರಾಜ್ಯಪಾಲರಿಗೆ ಬರೆಯಲ್ಪಟ್ಟ ಮನವಿ ಪತ್ರವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಮಂಜುನಾಥ ಸೊರಟೂರು, ಮೂರ್ತಪ್ಪ ಗಿಣಗೇರಿ, ದೇವಪ್ಪ ಹಳ್ಳಿಕೇರಿ, ಶರಣಪ್ಪ ಜಡಿ, ಮಲ್ಲನಗೌಡ್ರ ಕೋನನಗೌಡ್ರ, ಸೋಮನಗೌಡ, ಶಿವಕುಮಾರ ಮಹಾಂತಯ್ಯನಮಠ, ರವಿ ಮಾಗಳ್, ವಿರೇಶಗೌಡ ಚಿಕ್ಬಗನಾಳ, ಯಮನಪ್ಪ ಕಟೀಗಿ, ಶಾಂತಕುಮಾರ, ಮಹೇಶ ಕಂದಾರಿ, ಮಾರುತಿ ಪೇರ್ಮೀ, ವಸಂತ ಹಟ್ಟಿ, ಮಂಜುನಾಥ ವದಗನಾಳ, ಧ್ಯಾಮಣ್ಣ ಕಲಕೇರಿ, ಯಂಕಪ್ಪ ಮಣೆಗಾರ, ಲೋಕೇಶ ಬಾರಕೇರ, ರಂಗಪ್ಪ ಬೋವಿ, ರವಿ ಮೇಧಾರ, ಮಂಜು ಗಬ್ಬೂರ, ವಿರೇಶ ಮುದ್ದಾಬಳ್ಳಿ, ಅರುಣ ಕುಮಾರ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು