2fd94a67-11da-4d23-999e-ffe1241215b7

ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ಶಾಸಕ ರಾಯರೆಡ್ಡಿ ನೇಮಕ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, ೨೯- ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿರುವ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿದೆ.  ಹಲವಾರು ಭಾರಿ  ರಾಜ್ಯ ಸರ್ಕಾರದ ವಿರುದ್ಧ ಆರಂಭದಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದ ಈ ಮೂಲಕ ಸಿ.ಎಂ. ಅವರ ರಾಯರಡ್ಡಿ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಮಾಡಿದ್ದಾರೆ.

ತಮ್ಮ ಸರ್ಕಾರದ ವಿರುದ್ಧ ನನಗಿಂತ ಕಿರಿಯರು ಸಚಿವರಾಗಿದ್ದಾರೆ ಎಂದು ಹಿಂದೆ ರಾಯರಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದರು.  ಪಕ್ಷದ ವರಿಷ್ಠರು ನಿಗಮ ಮಂಡಳಿ ಸ್ಥಾನಮಾನ ನೀಡುವುದಾಗಿ ಹೇಳಿದ್ದರೂತಿರಸ್ಕರಿಸಿದ್ದರು. ಈಗ ಸರ್ಕಾರ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಿದೆ.

ಸಂಭ್ರಮ : ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಯಲಬುರ್ಗಾ ತಾಲೂಕಿನ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮ ವ್ಯಕ್ತ ಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!