080968dd-d5fd-4c81-a52a-6c2e2fd037c9

ಕರ್ನಾಟಕ ವಿಧಾನಸಭೆ ಮುಖ್ಯ ಸಚೇತಕರಾಗಿ

ಶಾಸಕ ದೊಡ್ಡನಗೌಡ ಪಾಟೀಲ ನೇಮಕ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, ೨೫-  ಜಿಲ್ಲೆಯ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲರನ್ನು ಕರ್ನಾಟಕ ವಿಧಾನಸಭೆ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.

ಈ ಕುರಿತು ನೇಮ ಮಾಡಿ ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ, ವಿಜಯೇಂದ್ರ ರಾಷ್ಟ್ರೀಯ ಅಧ್ಯಕ್ಷ ಜೆ,ಪಿ ನಡ್ಡಾ ಅವರ ಸೂಚನೆ ಮೇರೆಗೆ ನೇಮಕ ಮಾಡಿದ್ದು ವಿಧಾನ ಸಭೆಯಲ್ಲಿ  ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಸೇವೆ ಮಾಡುವಂತೆ ಸೂಚಿಸಿದ್ದಾರೆ.

ಡಬಲ್ ಧಮಾಕ ; ಜಿಲ್ಲೆಯ ಕುಷ್ಟಗಿ ತಾಲೂಕಿಗೆ ಬಿಜೆಪಿ ಪಕ್ಷ ಡಬಲ್‌ ಧಮಾಕ ನೀಡಿದ್ದು ಇತ್ತೀಚಿಗೆ ಶರಣು ತಳ್ಳಿಕೇರಿ ಅವರನ್ನು ಬಿಜೆಪಿ ರಾಜ್ಯ ಪ್ರದಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದು. ಇಂದು ಶಾಸಕ ದೊಡ್ಡನಗೌಡ ಪಾಟೀಲ್‌ ಅವರನ್ನು ಮುಖ್ಯ ಸಚೇತಕರನ್ನಗಿ ನೇಮಕ ಮಾಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!