
ಶೀಘ್ರದಲ್ಲಿ ಬಹದ್ದೂರ್ ಬಂಡಿ ನವಲ್ ಕಲ್ ಏತ ನೀರಾವರಿ ಯೋಜನೆ ಪೂರ್ಣ
ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ರೈತರ ಬಹುದಿನಗಳ ಬೇಡಿಕೆ ಶೀಘ್ರದಲ್ಲಿ ಈಡೇರಿಕೆ
14000 ಎಕರೆ ನೀರಾವರಿ ಪ್ರದೇಶ ರೈತರಿಗೆ ವರವಾಗಲಿದೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ ,02- ಬಹದ್ದೂರ್ ಬಂಡಿ ನವಲ್ ಕಲ್ ಏತ ನೀರಾವರಿ ಗೊಂಡಬಾಳ ಭಾಗದ ಗ್ರಾಮಗಳ ರೈತರ ಬಹುದಿನಗಳ ಬೇಡಿಕೆಯು ಈಡೇರಲಿದ್ದು ಶೀಘ್ರದಲ್ಲಿ ಬಹದ್ದೂರ್ ಬಂಡಿ ನವಲ್ ಕಲ್ ಏತ ನೀರಾವರಿ ಯೋಜನೆ ಪೂರ್ಣಗೋಂಡು ಸರೈತರಿಗೆ ವರದಾನವಾಗಿಲಿದೆ ಎಂದು ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಕೊಪ್ಪಳ ವಿಧಾನಸಭ ಕ್ಷೇತ್ರದಲ್ಲಿ ಇಂದು ಗೊಂಡಬಾಳ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಚುಕ್ಕನ ಕಲ್, ಮುದ್ದಾಬಳ್ಳಿ, ಹಳೇ ಗೊಂಡಬಾಳ, ಹೊಸ ಗೊಂಡಬಾಳ, ಹ್ಯಾಟಿ, ಮೆಳ್ಳಿಕೇರಿ, ಮುಂಡರಗಿ, ಬಿ. ಹೊಸಳ್ಳಿ, ಬಹದ್ದೂರ್ ಬಂಡಿ ಹಾಗೂ ಹೂವಿನಾಳ ಗ್ರಾಮದಲ್ಲಿ ಅಂದಾಜು ಮೊತ್ತ 11.77 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ನೆರವೇರಿಸಿ ಮಾತನಾಡಿದರು.
ಈ ಯೋಜನೆ ಜಾರಿ ಆಗಲೆಂದು ರೈತರು ಅನೇಕ ವರ್ಷಗಳ ಕಾಲ ಹೋರಾಟ ಕೂಡ ನಡೆಸಿದ್ದರು ಅವರ ಹೋರಾಟಕ್ಕೆ ಧ್ವನಿ ಆಗಿದ್ದು ನಮ್ಮ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. 2013-18 ವರೆಗಿನ ನಮ್ಮ ಆಡಳಿತದ ಅವಧಿಯಲ್ಲಿ 2018 ರಲ್ಲಿ ಈ ಬಹಾದ್ದೂರ್ ಬಂಡಿ ನವಲ್ ಕಲ್ ಏತ ನೀರಾವರಿ ಯೋಜನೆಯನ್ನು 188 ಕೋಟಿ ಅನುಧಾನ ಮಿಸಲಿಟ್ಟ ಮಂಜೂರು ಮಾಡಿಸಿದ್ದೆವು.ಈ ಯೋಜನೆಯಿಂದ ಈ ಭಾಗದಲ್ಲಿ ಸುಮಾರು 14000-15000 ಸಾವಿರ ಎಕರೆ ನೀರಾವರಿ ಪ್ರದೇಶ ಆಗಲಿದೆ ಎಂದರು.
ಈ ಬಹದ್ದೂರ್ ಬಂಡಿ ನವಲ್ ಕಲ್ ಏತ ನೀರಾವರಿ ಯೋಜನೆ ಮತ್ತೆ 250 ಕೋಟಿ ಅನುಧಾನ ಮಂಜೂರು ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೇನೆ,ಮಂಜೂರು ಮಾಡುವ ಭರವಸೆ ವ್ಯಕ್ತಪಡಿಸಿದ್ದಾರೆ.ಹೀಗಾಗಲೇ ಈ ಯೋಜನೆಡಿಯಲ್ಲಿ ಬಹುತೇಕ ಕಾಮಗಾರಿ ಮುಗಿದಿದ್ದು ಕಾಲುವೆ, ಉಪ ಕಾಲುವೆ ಹಾಗೂ ಹೊಲ ಕಾಲುವೆಯ ಕಾಮಗಾರಿ ಮಾತ್ರ ಬಾಕಿ ಉಳಿದಿದ್ದು ಅದನ್ನು ಕೂಡ ಶೀಘ್ರದಲ್ಲಿ ಮುಗಿಸಿ ಮುಖ್ಯಮಂತ್ರಿಗಳಿಂದ ಈ ನೀರಾವರಿ ಯೋಜನೆಯನ್ನೂ ಲೋಕಾರ್ಪಣೆ ಮಾಡಿಸಿ, ಈ ಭಾಗದ ರೈತರಿಗೆ ಅರ್ಪಣೆ ಮಾಡಲಾಗುವುದು.
ಫೆಬ್ರವರಿಯಲ್ಲಿ ರಸ್ತೆಗಳ ಅಭಿವೃದ್ಧಿಗೆ 100-150 ಕೋಟಿ ಅನುಧಾನ : ನಮ್ಮ ಕೊಪ್ಪಳ ವಿಧಾನಸಭ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವವನ್ನೂ ನೀಡಿದ್ದು ಈಗಾಗಲೇ ಕ್ಷೇತ್ರದಲ್ಲಿ 80-100 ಕೋಟಿ ವೆಚ್ಚದಲ್ಲಿ ಅನೇಕ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ.ಇನ್ನುಳಿದ ರಸ್ತೆಗಳ ಅಭಿವೃದ್ಧಿಗೆ ಮುಂದಿನ ಫೆಬ್ರವರಿ -ಮಾರ್ಚ್ ತಿಂಗಳಿನಲ್ಲಿ 100 ರಿಂದ 150 ಕೋಟಿ ಅನುಧಾನವನ್ನೂ ಮಂಜೂರು ಮಾಡಿಸಿ ಕ್ಷೇತ್ರದಲ್ಲಿ ಹದಗೆಟ್ಟಿರುವ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದು ಶಾಸಕರು ಭರವಸೆ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಮಾಜಿ ಜಿ. ಪಂ ಅಧ್ಯಕ್ಷರಾದ ಎಸ್ ಬಿ ನಾಗರಳ್ಳಿ, ಮಾಜಿ ಜಿ. ಪಂ ಸದಸ್ಯ ಗೂಳಪ್ಪ ಹಲಿಗೇರಿ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರೆಡ್ಡಿ ಗಲ್ಬಿ,ನಾಗನಗೌಡ ಮುಂಡರಗಿ,ವಿರುಪಣ್ಣ ನವೋದಯ,ಕೃಷ್ಣ ಇಟ್ಟಂಗಿ,ಸುರೇಶ್ ಮಾದಿನುರು, ಶರಣಪ್ಪ ಸಜ್ಜನ್, ತೋಟಪ್ಪ ಕಾಮನೂರು, ಹನಮೇಶ್ ಹೊಸಳ್ಳಿ, ಆನಂದ ಕಿನ್ನಾಳ,ಚಾಂದ್ ಪಾಷಾ ಕಿಲ್ಲೆದರ್,ರವಿ ಕುರುಗೋಡ್, ರಾಜು ಮಾದಿನೂರ್ ತಹಶೀಲ್ದಾರ್ ವಿಠ್ಠಲ್ ಚೌಗಲೇ, ತಾಲೂಕ ಪಂಚಾಯತ್ ಇಓ ದುಂದೇಶ ತುರಾದಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಲ್ಟನ್ ಸೇರಿದಂತೆ ಎಲ್ಲಾ ತಾಲೂಕ ಅಧಿಕಾರಿಗಳು ಉಪಸ್ಥಿತರಿದ್ದರು.