WhatsApp Image 2024-04-29 at 4.50.16 PM

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕಡ್ಡಾಯವಾಗಿ ಮತದಾನ ಮಾಡಿ : ಶಂಶೇ ಅಲಂ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 29- ಪ್ರಜಾಪ್ರಭುತ್ವ ಅರ್ಥ ಬರಲು ಮತ್ತು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮೇ 7 ರಂದು ಜರುಗುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಯಶಸ್ವಿಗೊಳಿಸಬೇಕು ಎಂದು ತಹಸಿಲ್ದಾರ್ ಶಂಸೇ ಆಲಂ ಅವರು ಅಭಿಪ್ರಾಯಪಟ್ಟರು.

ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್ ದಂಡಪ್ಪನವರು ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಬೇಕು ಚುನಾವಣೆ ಹಬ್ಬದಲ್ಲಿ ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದರು.

ಸಿರುಗುಪ್ಪ ತಾಲೂಕು ಕ್ರೀಡಾ ಮೈದಾನದಲ್ಲಿ ಜಿಲ್ಲಾ ಆಡಳಿತ ತಾಲೂಕು ಆಡಳಿತ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಸ್ವೀಪ್ ಸಮಿತಿ ನಗರಸಭೆ ಸಹಭಾಗಿತ್ವದಲ್ಲಿ ಸಿರುಗುಪ್ಪ ತಾಲೂಕಿನ ಅಧಿಕಾರಿಗಳ ತಂಡ ಮತ್ತು ಪತ್ರಕರ್ತರ ತಂಡಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿತ್ತು.

ಈ ಪಂದ್ಯಾವಳಿಗೆ ಅವರು ಚಾಲನೆ ನೀಡಿ ಮಾತನಾಡುತ್ತಾ ಮತ ಚಲಾಯಿಸಲು ಯಾರು ಕೂಡ ನಿರ್ಲಕ್ಷ್ಯ ತೋರಬಾರದು ಯುವಕರು ಕ್ರಿಕೆಟ್ ಪ್ರೇಮಿಗಳಾಗಿದ್ದಾರೆ ಈ ಹಿನ್ನೆಲೆಯಲ್ಲಿ ಯುವ ಮತದಾರರನ್ನು ಸೆಳೆಯಲು ಕ್ರಿಕೆಟ್ ಪಂದ್ಯ ಆಯೋಜಿಸಲಾಗಿದೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಜ್ಞಾ ವಿಧಿ ಭೋದಿಸಲಾಯಿತು.

ಬ್ಯಾಟಿಂಗ್ ಬೌಲಿಂಗ್ ಫೀಲ್ಡಿಂಗ್ ಮೂಲಕ ಕ್ರಿಕೆಟ್ ಪಂದ್ಯ ಗಮನ ಸೆಳೆದರು ಜೊತೆಗೆ ಅಧಿಕಾರಿಗಳೊಂದಿಗೆ ದಿನಪತ್ರಿಕೆ ಟಿವಿ ಮಾಧ್ಯಮದ ಪತ್ರಕರ್ತರು ಉತ್ತಮ ಬೌಲಿಂಗ್ ಬ್ಯಾಟಿಂಗ್ ಮಾಡಿದರು.

ಹಿರಿಯ ಪತ್ರಕರ್ತರಾದ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಹುಸೇನಿ ರಮೇಶ್ ಮೊಹಮ್ಮದ್ ನೌಶಾದ್ ಅಲಿ ಚಾಂದ್ ಭಾಷಾ ಬಸವ ರೆಡ್ಡಿ ಪಂಪಾಪತಿ ಐರಾಣಿ ಮಾರೆಪ್ಪ ನಗರಸಭೆಯ ಏ ಇ ಇ ಗಂಗಾಧರ ಗೌಡ ಸೇರಿದಂತೆ ಯುವ ಮತದಾರರು ಕ್ರೀಡಾ ಅಭಿಮಾನಿಗಳು ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು .

Leave a Reply

Your email address will not be published. Required fields are marked *

error: Content is protected !!