
ಸರಸ್ವತಿ ವಿದ್ಯಾಮಂದಿರ ೨೦೨೪ನೇ ಸಾಲಿನ
ದಿನದರ್ಶಿಕೆ ಬಿಡುಗಡೆ ಮಾಡಿದ ಗವಿಶ್ರೀಗಳು
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೨೭- ನಗರದ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ಹೊರತರಲಾಗಿರುವ ೨೦೨೪ನೇ ವರ್ಷದ ದಿನದರ್ಶಿಕೆ(ಕ್ಯಾಲೆಂಡರ್ ) ಯನ್ನು ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು. ಹೊಸ ವರ್ಷ ಎಲ್ಲರಿಗೂ ಶುಭವಾಗಲಿ. ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಗವಿಶ್ರೀಗಳು ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಆರ್.ಎಚ್.ಅತ್ತನೂರು, ಮುಖ್ಯೋಪಾಧ್ಯಾಯನಿ ಶ್ರೀಮತಿ ರೇಣುಕಾ ಅತ್ತನೂರ , ಶಾಲೆಯ ಶಿಕ್ಷಕರಾದ ಲಕ್ಷಿö್ಮÃ, ದುರುಗೇಶ್, ಮಹೇಶ್ವರಿ ಹಿರೇಮಠ, ಸುಜಾತಾ ಹಿರೇಮಠ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.