SHIVAJI JAYANTI MEETING (1)

19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಗೆ ಅಗತ್ಯ ಸಿದ್ದತೆಗೆ ಸೂಚನೆ

 

ಕರುನಾಡ ಬೆಳಗು ಸುದ್ದಿ
ಕೊಪ್ಪಳ,8- ಫೆಬ್ರವರಿ 19ರಂದು ಆಚರಿಸಲ್ಪಡುವ ಛತ್ರಪತಿ ಶಿವಾಜಿ ಮಹರಾಜ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಛತ್ರಪತಿ ಶಿವಾಜಿ ಮಹರಾಜ ಜಯಂತಿ ಆಚರಿಸುವ ಕುರಿತಂತೆ ಚರ್ಚಿಸಲು ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಫೆಬ್ರವರಿ 8ರಂದು ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
   ಜಯಂತಿ ದಿನದಂದು ಎಲ್ಲಾ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಛತ್ರಪತಿ ಶಿವಾಜಿ ಮಹರಾಜರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಮಾಜದ ಮುಖಂಡರು ಮಾತನಾಡಿ, ಈ ಬಾರಿಯ ಛತ್ರಪತಿ ಶಿವಾಜಿ ಮಹರಾಜ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದು, ಜಿಲ್ಲಾಡಳಿತ ಭವನದಲ್ಲಿ ಪೂಜಾ ಕಾರ್ಯಕ್ರಮಕ್ಕೆ ಅನುಕೂಲ ಮಾಡಿಕೊಡಬೇಕು. ಜಯಂತಿ ದಿನದಂದು ನಗರದ ಶಿವಾಜಿ ಸರ್ಕಲ್ ಬಳಿ ಸಮಾಜದ ವತಿಯಿಂದ ನಡೆಯುವ ಪೂಜಾ ಕಾರ್ಯಕ್ರಮಕ್ಕೆ ಹಾಗೂ ಅಕ್ಕಮಹಾದೇವಿ ದೇವಸ್ಥಾನದಲ್ಲಿ ನಡೆಯುವ ಕೋಟೆ ರಸ್ತೆಯ ಪ್ರಸಾದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
    ಈ ವೇಳೆ ಮಾತನಾಡಿದ ಉಪ ವಿಭಾಗಾಧಿಕಾರಿಗಳು, ಜಯಂತಿ ದಿನದಂದು ಛತ್ರಪತಿ ಶಿವಾಜಿ ಮಹರಾಜರ ವೃತ್ತ ಹಾಗೂ ಅಕ್ಕಮಹಾದೇವಿ ಹತ್ತಿರ ಸ್ವಚ್ಛತೆಗೆ ನಗರಸಭೆಯಿಂದ ಸೂಕ್ತ ಕ್ರಮ ವಹಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಸಮಾಜದ ಮುಖಂಡರಾದ ನಾಗೇಶ ರಾವ್ ಬಡಿಗೇರ್, ಮಾರುತಿ ಕಾರಟಗಿ, ಚಂದ್ರಶೇಖರ್ ಬಡಿಗೇರ್, ಈಶಪ್ಪ ಅರಿಕೇರಿ, ಉಮೇಶ ಸುರ್ವೆ, ರಮೇಶ ಗೊರ್ಪಡೆ, ಬಸವರಾಜ ಕಂಪ್ಲಿ, ಮಾರುತಿ ಆಪ್ಟೆ ಸೇರಿದಂತೆ ಹಲವು ಗಣ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!