
ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ಲಕ್ಷ್ಮೀದೇವಿ
ಕರುನಾಡ ಬೆಳಗು ಸುದ್ದಿ
ಕಾರಟಗಿ, 5-ತಾ.ಪಂ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಣೆ ಇಂದಿನ ದಿನದಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ ರವರು ಹೇಳಿದರು.
ತಾಲೂಕು ಪಂಚಾಯತ ಆವರಣದಲ್ಲಿ ತಾ.ಪಂ ಹಾಗೂ ಸಾಮಾಜಿಕ ಅರಣ್ಯ ವಲಯ ಗಂಗಾವತಿ ರವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆ. ಈ ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಇತ್ಯಾದಿಗಳು ಎಂದೆಂದಿಗೂ ಉಳಿಯಬೇಕು. ನಾವೆಲ್ಲರೂ ಅವಲಂಬಿತರಾಗಿರೋದು ಈ ಪರಿಸರ, ಅದಕ್ಕಾಗಿ ಪರಿಸರವನ್ನು ಸಂರಕ್ಷಿಸಲು ಮುಂದಾಗಬೇಕು ಎಂದರು.
ನಂತರ ವಲಯ ಅರಣ್ಯ ಅಧಿಕಾರಿಗಳಾದ ರಾಘವೇಂದ್ರ ಅವರು ಮಾತನಾಡಿ ಪರಿಸರದ ಕಾಳಜಿ ಹಾಗೂ ಪರಿಸರದ ಮಹತ್ವವನ್ನು ತಿಳಿಸಿ ನಾವೆಲ್ಲರೂ ಪರಿಸರ ಸ್ನೇಹಿಯಾಗಿ ಬಾಳೋಣ ಎಂದರು. ನಂತರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ಸಸಿಗಳನ್ನು ನಡೆಲಾಯಿತು
ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕರಾದ ವೈ.ವನಜಾ, ಉಪ ವಲಯ ಅರಣ್ಯ ಅಧಿಕಾರಿಗಳಾದ ಕವಿತಾ ನಾಯಕ, ತಾಲೂಕಿನ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗಸ್ತು ಅರಣ್ಯ ಪಾಲಕರಾದ ಶಿವಶರಣ ಕೊಳಿ, ಮಹಾಂತೇಶ ಕುಂಬಾರ ಸೇರಿ ತಾ.ಪಂ ವಿವಿಧ ಯೋಜನೆಗಳ ವಿಷಯ ನಿರ್ವಾಹಕರು, ನರೇಗಾ, ತಾ.ಪಂ ಸಿಬ್ಬಂದಿಗಳು ಇದ್ದರು.