
19 ನೇ ಟ್ರಸ್ಟ್ ಗೇಟ್ ಕಳಚಿರುವ ಪ್ರಕರಣ
ಬಿಜೆಪಿಗರಂತೆ ನಾವು ರಾಜಕೀಯ ಮಾಡೋದಿಲ್ಲ
-ಮುಖ್ಯಮಂತ್ರಿ ಸಿದ್ದರಾಮಯ್ಯ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 13- ತುಂಗಭದ್ರಾ ಜಲಾಶಯದಲ್ಲಿ ಟ್ರಸ್ಟ್ ಗೇಟ್ 19 ಕಳಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ರಾಜಕೀಯ ಮಾಡೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ತಾಲೂಕಿನ ಬಸಾಪೂರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ರೈತರ ಹಿತ ಕಾಯುವುದು ಮೊದಲ ಆದ್ಯತೆ. ತುಂಗಭದ್ರಾ ಜಲಾಶಯ 105 ಟಿಎಂಸಿ ತುಂಬಿತ್ತು.ಇದರಲ್ಲಿ 50 ಟಿಎಂಸಿ ನೀರು ಹೊರ ಬಿಡಬೇಕಿದೆ. ಉಳಿಯುವ ನೀರನ್ನು ರೈತರ ಅನುಕೂಲಕ್ಕೆ ಬಳಸಲಾಗುವುದು ಎಂದು ಸ್ಪಷ್ಟ ಪಡಿಸಿದರು.
ಬಿಜೆಪಿಗರು ಅನಾವಶ್ಯಕ ರಾಜ್ಯದ ಮೇಲೆ ಗುಬೆ ಕುಡಿಸಿತ್ತಿರುವುದು ಸರಿ ಅಲ್ಲಾ ತುಂಗಭದ್ರಾ ಬೋರ್ಡ್ ಇರುವುದು ಕೇಂದ್ರ ಸರಕಾರದ ಅಧೀನದಲ್ಲಿ. ಬೋರ್ಡ್ ಗೆ ಐಎಎಸ್ ಅಧಿಕಾರಿಗಳನ್ನು ಭಾರತ ಸರಕಾರ ನೇಮಕ ಮಾಡುತ್ತದೆ. ಬೋರ್ಡ್ ನಲ್ಲಿ ರಾಜ್ಯ, ಆಂಧ್ರ, ತೆಲಂಗಾಣದ ಅಧಿಕಾರಿಗಳು ಇರುತ್ತಾರೆ ಅವರಿಗೆ ತಿಳುವಳಿಕೆಯ ಕೋರತೆ ಇದೆ ಎಂದರು.
ವಾಸ್ತವವಾಗಿ ನಿರ್ವಹಣೆ ವೈಫಲ್ಯ ಇರುವುದು ಕೇಂದ್ರ ಸರಕಾರದಿಂದ. ಇದೆಲ್ಲವನ್ನು ಆರೋಪ ಮಾಡಬೇಕಾಗಿರುವುದು ಕೇಂದ್ರದ ಮೇಲೆ, ಆದರೆ, ನಾನು ಡ್ಯಾಂ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡುತ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೋಡೋದಕ್ಕೆ ಹೋಗೋದಿಲ್ಲ.
ನಿರೀಕ್ಷೆ ; ನಮಗಿರುವ ಹವಾಮಾನ ಮೂನ್ಸೂಚನೆ ಪ್ರಕಾರ ಮತ್ತೆ ಮಳೆ ಆಗುವ ಅವಕಾಶವಿದ್ದು ಆಗಷ್ಟ, ಸೆಫ್ಡಂಬರ್, ಅಕ್ಡೊಂಬರ್ ತಿಂಗಳಲ್ಲಿಮತ್ತಷ್ಟು ನೀರು ಬರುವ ನಿರೀಕ್ಷೆ ಇದೇ ಎಂದು ಭರವಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಚಿವ ಶಿವರಾಜ ತಂಗಡಗಿ, ಬೋಸರಾಜ, ಜಮ್ಮೀರ ಅಹ್ಮದ್ , ಸಂಸದ ರಾಜಶೇಖರ ಹಿಟ್ನಾಳ, ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ಹೆಚ್ಚ್ ಆರ್ ಗವಿಯಪ್ಪ ಇತರು ಇದ್ದರು.