
ಕನಕದಾಸರ ಜಯಂತಿ ಪೂರ್ವಭಾವಿ ಸಭೆ
ಸರ್ಕಾರ, ಸಮುದಾಯಗಳ ಸಮನ್ವದಲ್ಲಿ ಮಹನೀಯರ ಜಯಂತಿ : ಡಿಸಿ ದಿವಾಕರ
ಕರುನಾಡ ಬೆಳಗು ಸುದ್ದಿ
ವಿಜಯನಗರ, 7- ಸರ್ಕಾರ ಮಹನೀಯರ ಜಯಂತಿಗಳ ಆಚರಣೆಗೆ ಅನುದಾನ ಬಿಡುಗಡೆ ಮಾಡುತ್ತದೆ, ಅದ್ದೂರಿ ಅಚರಣೆ ಮಾಡಲು ಸಮುದಾಯಗಳು ಕೈ ಜೋಡಿಸಿದಾಗ ಆ ಜಯಂತಿಗಳಿಗೆ ಮೆರಗು ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನವಂಬರ್ ೭ ರಂದು ನಡೆದ ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಮತ್ತು ಸಮುದಾಯದ ಸಮನ್ವದಲ್ಲಿ ಒಟ್ಟು ೪೬ ಮಹನೀಯರ ಜಯಂತಿಗಳನ್ನು ಆಚರಣೆ ಮಾಡಲಾಗುತ್ತದೆ. ಕನಕ ದಾಸರ ಜಯಂತಿಯAದು ಭಾವಚಿತ್ರದ ಮೆರವಣಿಗೆ ನವಂಬರ್ ೧೮ ರಂದು ಬೆಳಿಗ್ಗೆ ೯ ಗಂಟೆಗೆ ಅಭಯ ಹಸ್ತ ಆಜಂನೇಯ ದೇವಸ್ಥಾನದಿಂದ ವೀರ ಮದಕರಿ ವೃತ್ತ, ಉದ್ಯೋಗ ಪೆಟ್ರೋಲ್ ಬಂಕ್, ಮಸೀದಿ ರಸ್ತೆ, ಗಾಂಧಿ ಚೌಕ್, ಕೆಕೆಆರ್ಟಿಸಿ ಬಸ್ ನಿಲ್ದಾಣ, ಕೃಷ್ಣ ಪ್ಯಾಲೇಸ್ ಮಾರ್ಗವಾಗಿ ನೇರವಾಗಿ ಕನಕ ವೃತ್ತದ ವರೆಗೆ ಸಾಂಸ್ಕೃತಿಕ ಕಲಾ ತಂಡಗಳೊAದಿಗೆ ಮೆರವಣಿಗೆ ನಡೆಸಲಾಗುವುದು.
ಸಮುದಾಯದವರ ನಿರ್ಧಾರದಂತೆ ಈ ಭಾರಿ ವೇದಿಕೆ ಕಾರ್ಯಕ್ರಮವನ್ನು ನಗರಸಭೆ ಆವರಣದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಜಯಂತಿಯ ದಿನದಂದು ಯಾವುದೇ ಲೋಪವಾಗಬಾರದು. ಮೆರವಣಿಗೆ, ವೇದಿಕೆ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ನೆರವೇರಿಸಬೇಕು. ಉತ್ತಮ ಕಲಾ ತಂಡದವರನ್ನು ಕರೆತಂದು ಜಯಂತಿಯ ಮೆರಗು ಹೆಚ್ಚಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಸಮುದಾಯ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಸಮುದಾಯದವರ ಆಶಯದಂತೆ ನಗರಸಭೆ ಆವರಣದಲ್ಲಿ ಈ ಬಾರಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಹಾಗೂ ಕಳೆದ ಬಾರಿ ೩ ಕಲಾ ತಂಡಗಳನ್ನು ಕರೆತರಲಾಗಿತ್ತು. ಈ ಭಾರಿ ೫ ಕಲಾ ತಂಡಗಳನ್ನು ಕರೆಸಲಾಗುವುದು ಎಂದು ಸಭೆಗೆ ಜಿಲ್ಲಾಧಿಕಾರಿಗಳು ತಿಳಿಸಿದರು.
ವೇದಿಕೆ ಕಾರ್ಯಕ್ರಮಕ್ಕೆ, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಪೊಲೀಸ್ ಇಲಾಖೆ ಅಧಿಕಾರಿಗಳು ಮಾಡಬೇಕು. ಶಿಷ್ಟಾಚಾರದನ್ವಯ ಜಯಂತಿಯ ಆಮಂತ್ರಣ ಪತ್ರಿಕೆ ಮುದ್ರಿಸಿ, ಆಮಂತ್ರಣ ಪತ್ರಿಕೆಗಳನ್ನು ಗಣ್ಯ ಮಾನ್ಯರಿಗೆ ವಿತರಿಸಬೇಕು. ಜಯಂತಿಯ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ಜಯಂತ್ಯುತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ವಿವಿಧ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಷಾ, ಹೊಸಪೇಟೆ ಸಹಾಯಕ ಆಯುಕ್ತರಾದ ವಿವೇಕಾನಂದ ಪಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶರಣಪ್ಪ ಮುದಗಲ್, ನಗರಸಭೆಯ ಪೌರಾಯುಕ್ತರಾದ ಚಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಶಂಕರ್ ನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ.ಎಸ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ್, ಹೊಸಪೇಟೆ ತಹಶೀಲ್ದಾರರಾದ ಶೃತಿ ಎಂ.ಎA, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ.ಕೆ ರಂಗಣ್ಣನವರ ಮತ್ತು ಸುಮುದಾಯದ ಮುಖಂಡರು ಉಪಸ್ಥಿತರಿದ್ದರು.