ea217861-8763-4a12-88af-671f41bec94c

 ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ

ಹಂಗಾಮಿ ಕುಲಪತಿಯಾಗಿ ಪ್ರೊ.ಅನಂತ್ ನೇಮಕ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, ೦೮-  ಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದಡೀನರು ಹಾಗೂ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಅನಂತ್ ಎಲ್ ಝಂಡೇಕರ್ ಅವರನ್ನು ನೇಮಕ ಮಾಡಿ  ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಸನ್ಮಾನ: ವೆಂಕಟೇಶ್ ಹೆಗಡೆ ವಕೀಲರು, ಮಾಜಿ ವಿದ್ಯಾ ವಿಷಯಕ ಪರಿಷತ್ ಸದಸ್ಯರು ರವರು ಇಂದು ಕಛೇರಿಯಲ್ಲಿ ಸನ್ಮಾನಿಸಿದರು.ಹಾಗೆಯೇ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೆ ಬಾಕಿ ವೇತನ ನೀಡಲು ಕೋರಲಾಯಿತು, ಮತ್ತು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹೆಚ್ಚಿನ ಹೊತ್ತನ್ನು ನೀಡಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಬೋಧಕರಾದ ಪ್ರೊಫೆಸರ್ ಗೌರಿ ಮಾನಸ ಮತ್ತು ಮೋಹನ್ ದಾಸ್, ಹಾಗೂ ಸ್ನೇಹ ಸುಮ ಹೆಗಡೆ, ದೀಪಕ್, ರಾಜ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!