KB

ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿ0ದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ನವೆಂಬರ್ 25 ರಿಂದ 10 ದಿನಗಳ ಕಾಲ ಅಗರಬತ್ತಿ ತಯಾರಿಕೆ ತರಬೇತಿ ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ನವೆಂಬರ್ 23 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿ0ಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನೇತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

Leave a Reply

Your email address will not be published. Required fields are marked *

error: Content is protected !!