
ಅಲ್ಪಸಂಖ್ಯಾತರಿಗೆ ಕಾನೂನು ತರಬೇತಿ ಭತ್ಯೆ : ಅವಧಿ ವಿಸ್ತರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29- ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ್ದು ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ಹೆಸರನ್ನು ನೋಂದಾಯಿಸಿರಬೇಕು.
ಅರ್ಜಿ ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷವಾಗಿರಬೇಕು ಮತ್ತು ಅರ್ಜಿ ಸಲ್ಲಿಸಲುವ ಕೊನೆಯ ದಿನಾಂಕ್ಕೆ ಕಾನೂನು ಪದವಿ ಪೂರ್ಣಗೊಳಿಸಿ 2 ವರ್ಷವಾಗಿರಬೇಕು. ಅಭ್ಯರ್ಥಿಗಳ ಸಲ್ಲಿಸುವ ಮಾಹೆಯಾನ ದಿನಚರಿಯನ್ನು ಪರಿಶೀಲಿಸಿ ತರಬೇತಿ ಭತ್ಯೆಯನ್ನು ಮಂಜೂರು ಮಾಡಲಾಗುವುದು.
ಅಭ್ಯರ್ಥಿಯು ತರಬೇತಿಯನ್ನು ಮಧ್ಯದಲ್ಲಿ ಬಿಡುವಂತಿಲ್ಲ ಹಾಗೂ ಈ ಬಗ್ಗೆ ಒಂದು ಮಚ್ಚಳಿಗೆ ಪತ್ರ ನೀಡಬೇಕು. ಒಂದು ವೇಳೆ ಸರ್ಕಾರಿ ಉದ್ಯೋಗ ದೊರಕಿದಲ್ಲಿ ಅಥವಾ ನ್ಯಾಯಾಧೀಶರಾಗಿ ನೇಮಕಾತಿ ಹೊಂದಿದಲ್ಲಿ, ಜಿಲ್ಲಾ ಸಮಿತಿಯ ಗಮನಕ್ಕೆ ತಂದು ತರಬೇತಿ ಬಿಡಬಹುದು ಹಾಗೂ ವಿಶೇಷ ಸಂದರ್ಭದಲ್ಲಿ ಬಿಡಬೇಕಾದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು.
ಈ ತರಬೇತಿಗೆ ಜಿಲ್ಲೆಯಲ್ಲಿ 03 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಇಚ್ಛಿಸುವ ಕೊಪ್ಪಳ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿ ನಿಗದಿತ ಅರ್ಜಿಗಳನ್ನು ಉಚಿತವಾಗಿ ಪಡೆದು ಆಗಸ್ಟ್ 14ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.