
ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 01- ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದಲ್ಲಿ ಅ. ೩ ಗುರುವಾರದಂದು ಕಾಯಚಿಕಿತ್ಸಾ ವಿಭಾಗದ ತಜ್ಞ ವೈದ್ಯರಿಂದ ವಿಶೇಷ ಮಧುಮೇಹÀ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ಉಚಿತವಾಗಿ ಆಯ್ದ ರಕ್ತ ಮತ್ತು ಮೂತ್ರ ಪರೀಕ್ಷೆ, ತಪಾಸಣೆ ಹಾಗೂ ಮೊದಲು ಬಂದ ೫೦ ರೋಗಿಗಳಿಗೆ ಉಚಿತ ಔಷಧಿಯನ್ನು ಮೈಲಾ ಬಯೋಲಾಜಿಕಲ್ ಫಾರ್ಮಸಿಟಿಕಲ್ ಕಂಪನಿಯು ವಿತರಿಸುತ್ತದೆ ಎಂದು ಕಾಯಚಿಕಿತ್ಸಾ ವಿಭಾಗದ ಸಹಪ್ರಾಧ್ಯಾಪಕಿ ಡಾ.ಮಂಜುಳಾ ಕರ್ಲವಾಡ, ಆಸ್ಪತ್ರೆಯ ಮೇಲ್ವಿಚಾರಕ ಡಾ.ಗವಿ. ಪಾಟೀಲ ಮತ್ತು ಪ್ರಾಂಶುಪಾಲ ಡಾ.ಮಹಾಂತೇಶ ಸಾಲಿಮಠ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ 8217395242 ಗೆ ಸಂಪರ್ಕಿಸಬಹುದು.