
ನೇಕಾರರಿಗೆ ಸರ್ಕಾರ ಸಹಕಾರ ನೀಡಬೇಕು : ವಿರೂಪಾಕ್ಷಪ್ಪ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 7- ನೇಕಾರ ಕಾರ್ಮಿಕರಿಗೆ ಸರ್ಕಾರ ಸಹಕಾರ ನೀಡಬೇಕೆಂದು ಕಾವೇರಿ ಹಂಡ್ಲುಮ್ಸ್ ಮಾಜೀ ಅಧ್ಯಕ್ಷ ರು ನೇಕಾರ ವಿರೂಪಾಕ್ಷಪ್ಪ ಕೋರಿದರು.
ಕೈಮಗ್ಗ ನೇಕಾರ ದಿನಾಚರಣೆ ಅಂಗವಾಗಿ ತಿಪ್ಪೇರುದ್ರಸ್ವಾಮಿ ಕೈಮಗ್ಗ ಸಹಕಾರ ಸಂಘದ ವತಿಯಿಂದ ಗೋನಾಳ ಸಹಕಾರ ಸಂಘದ ಕಚೇರಿ ಬಳಿ ನಡೆದ ಕಾರ್ಯ್ರಮದಲ್ಲಿ ಅವರು ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ನೇಕಾರ ಕಾರ್ಮಿಕರಿಗೆ ಪ್ರೋತ್ಸಾಹ ನೀಡಿ ನಮ್ಮ ದೇಶದ ಖಾದಿ ಸಂಪತ್ತನ್ನು ಉಳಿಸಬೇಕೆಂದರು.
ಜೇಡರ ದಾಸಿಮಯ್ಯ ಗುರುಗಳಿಗೆ, ಮಹಾತ್ಮಗಾಂಧಿ ಅವರ ಚಿತ್ರಪಟಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕೈಮಗ್ಗ ಕಾರ್ಮಿಕರು ಪಾತಿಮಾ, ಜ್ಯೋತಿ, ಕೋಮಲ, ಲಕ್ಷ್ಮಿ, ಶ್ರೀರಂಗಮ್ಮ, ಸುನೀತ, ಸತ್ಯವತಿ, ಲಕ್ಷ್ಮೀದೇವಿ ಮುಂತಾದವರಿಗೆ ಬಟ್ಟೆಗಳು ನೀಡಿ ಸನ್ಮಾನಸಲಾಯಿತು. ಕೈಮಗ್ಗ ಸಂಘದ ವತಿಯಿಂದ ವಿರುಪಕ್ಷಪ್ಪ ಅವರನ್ನು ಸತ್ಕರಿಸಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧಯಕ್ಷರು ಕಿರಣ್ ಕುಮಾರ್, ಉಪಾಧ್ಯಕ್ಷರು ವಿನೋದ್ ಕುಮಾರ್, ಕಾರ್ಯದರ್ಶಿ ಗುರುಸ್ವಾಮಿ, ನಿರ್ದೇಶಕರು ಸೋಮಶೇಖರ್, ತೇಜುಬಾಬು .. ರಂಗಭೂಮಿ ಕಲಾವಿದ ನಾಗಭೂಷಣ,ಸದಸ್ಯರು, ಕಾರ್ಮಿಕರು ಹಾಜರಿದ್ದರು.