3

ತಗ್ಗು ಪ್ರದೇಶಗಳಿಗೆ ನೀರು ನುಗ್ಗದಂತೆ ಕ್ರಮ ವಹಿಸಲು ಶಾಸಕ ಭರತ್ ರೆಡ್ಡಿ ಸೂಚನೆ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 6- ಭಾರೀ ಮಳೆಯಿಂದಾಗಿ ಬಳ್ಳಾರಿಯ ಕೆಲ ವಾರ್ಡ್ಗಳ ತಗ್ಗು ಪ್ರದೇಶಗಳಲ್ಲಿನ ಮನೆ ಹಾಗೂ ಇತರ ಕಟ್ಟಡಗಳಿಗೆ ನೀರು ನುಗ್ಗಿದ್ದು ಮುಂದೆ ಈ ರೀತಿಯ ಸಮಸ್ಯೆ ಮರುಕಳಿಸದ ಹಾಗೆ ಕ್ರಮ ವಹಿಸುವಂತೆ ನಗರ ಶಾಸಕ ನಾರಾ ಭರತ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ವಾರ್ಡ್ ಸಂಖ್ಯೆ ೨೦ರ ಹುಸೇನ್ ನಗರ, ರಾಯಲ್ ಕಾಲೋನಿಗಳಿಗೆ ಭೇಟಿ ನೀಡಿ ನೆರೆ ಪೀಡಿತ ಕಟ್ಟಡಗಳನ್ನು ಪರಿಶೀಲಿಸಿದರು.

ತೆರೆದ ಚರಂಡಿಗಳಲ್ಲಿ ಹೂಳು ತುಂಬಿದ್ದು, ಹೂಳನ್ನು ಸ್ವಚ್ಛಗೊಳಿಸಬೇಕು. ಹಾನಿಯಾಗಿರುವ ಚರಂಡಿಗಳನ್ನು ತಕ್ಷಣ ರಿಪೇರಿ ಮಾಡಬೇಕು ಹಾಗೂ ರಾಯಲ್ ಕಾಲೋನಿ ಹಾದು ಹೋಗಿರುವ ರಾಜ ಕಾಲುವೆಯನ್ನು ೨೪ ಗಂಟೆಯಲ್ಲಿ ಸ್ವಚ್ಛಗೊಳಿಸಿ ವರದಿ ನೀಡುವಂತೆ ಸ್ಥಳದಲ್ಲಿ ಹಾಜರಿದ್ದ ಪಾಲಿಕೆಯ ಆಯುಕ್ತ ಖಲೀಲಸಾಬ ಅವರಿಗೆ ಸೂಚಿಸಿದರು.

ವಾರ್ಡ್ ಭೇಟಿ ಸಂದರ್ಭ ಮಾಜಿ ಮೇಯರ್ ನಾಗಮ್ಮ, ಪಾಲಿಕೆಯ ಸದಸ್ಯ ಪೇರಂ ವಿವೇಕ್ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!