
ಸಮುದಾಯದ ವೈಯಕ್ತಿಕ ಕಾಮಗಾರಿಗಳ ಸದುಪಯೋಗ ಪಡೆಯಲು ಪಿಡಿಓ ಕರೆ
ಕರುನಾಡ ಬೆಳಗು ಸುದ್ದಿ
ಕಾರಟಗಿ, 20- ಮನರೇಗಾ ಯೋಜನೆಯಡಿ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಸದುಪಯೋಗ ಪಡೆಯಲು ಗ್ರಾಮಸ್ಥರಿಗೆ ಬೂದಗುಂಪಾ ಗ್ರಾ.ಪಂ ಪಿಡಿಓ ವೆಂಕಟೇಶ್ ನಾಯಕ ಅವರು ಹೇಳಿದರು.
ತಾಲೂಕಿನ ಬೂದಗುಂಪಾ ಗ್ರಾಮ ಪಂಚಾಯತಿಯಲ್ಲಿ ೨೦೨೫-೨೬ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕ್ರಿಯಾ ಯೋಜನೆ ತಯಾರಿಸಲು ಹಮ್ಮಿಕೊಂಡಿದ್ದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮದ ಜನರು ನರೇಗಾ ಯೋಜನೆಯ ಮೂಲಕ ಹಲವಾರು ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಳ್ಳಬಹುದು. ನರೇಗಾದಡಿ ಅರ್ಹ ಕುಟುಂಬಗಳಿಗೆ ವರ್ಷದಲ್ಲಿ ೧೦೦ ದಿನ ಕೆಲಸ ಒದಗಿಸಲಾಗಿದ್ದು, ಪ್ರತಿ ದಿನಕ್ಕೆ ೩೪೯ ರೂ. ಕೂಲಿ ಪಾವತಿಸಲಾಗುತ್ತಿದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಯೋಜನೆಯಡಿ ಕ್ಯೂಆರ್ ಕೋಡ್ ಬಳಸಿ ಸಲ್ಲಿಸಿದ ಬೇಡಿಕೆಗಳ ಕಾಮಗಾರಿಗಳ ಪರಿಶೀಲನೆ ಮಾಡಿ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.
ಗ್ರಾಮ ಸಭೆ ನೋಡಲ್ ಅಧಿಕಾರಿಗಳು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ವಿನಾಯಕ ಮುತ್ತು ಅವರು ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನ ಮಾಡಿಕೊಳ್ಳುವ ನರೇಗಾ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು.
ತಾ.ಪಂ ಐಇಸಿ ಸಂಯೋಜಕ ಸೋಮನಾಥ ರವರು ಮಾತನಾಡಿ ನರೇಗಾ ಯೋಜನೆಯಿಂದ ಕೂಲಿಕಾರರ ಜೀವನಕ್ಕೆ ಭದ್ರತೆ ಒದಗಿಸುವುದು. ದೀರ್ಘಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜಿಸುವುದು. ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅರ್ಹ ಪ್ರತಿ ಕುಟುಂಬಗಳಿಗೆ ಉದ್ಯೋಗ ಚೀಟಿ ನೀಡಿ, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಒದಗಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಯೋಜನೆ ಸಹಕಾರಿಯಾಗಿದೆ ಎಂದರು.
ಬಳಿಕ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ೩ ಗ್ರಾಮಗಳಿಂದ ಮನೆ ಮನೆ ಭೇಟಿ ಹಾಗೂ ವಾರ್ಡ್ ಸಭೆಯಲ್ಲಿ ಬಂದAತಹ ಬೇಡಿಕೆಯ ಅರ್ಜಿಗಳನ್ನು ಓದಿ ಹೇಳಲಾಯಿತು.
ಈ ವೇಳೆ ಗ್ರಾ.ಪಂ ಅಧ್ಯಕ್ಷೆ ದೇವಮ್ಮ ಸುರೇಶ್ ಬೆಳ್ಳಿಕಟ್ಟಿ, ಉಪಾಧ್ಯಕ್ಷ ಭೀಮನಗೌಡ ಜುಟ್ಲಾದ್, ಸದಸ್ಯ ಶ್ರೀಧರ ಗೋನಾಳ್, ಮೈಬೂಬ್ ಜಮದಾರ, ಷಣ್ಮುಖಪ್ಪ ಎನ್, ಭೀಮಮ್ಮ ತಳವಾರ, ಮೌಲಾಬಿ ದೊಡ್ಡಮನಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ರಾಮಣ್ಣ, ಬಸವರಾಜ್ , ಬಸನಗೌಡ, ಪೂಜಾ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಗುಂಪಿನ ಸದಸ್ಯರು, ನರೇಗಾ ಕಾಯಕ ಬಂಧುಗಳು ಇದ್ದರು.