ಗೆದಗೇರಿ ಗ್ರಾಮದ ನರೇಗಾ ಕೂಲಿಕಾರರಿಗೆ ಸ್ವೀಪ್ ಕಾರ್ಯಕ್ರಮ (2)

ಗೆದಗೇರಿ ಗ್ರಾಮದ ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 2- ಮತದಾನ ಪವಿತ್ರವಾದ ಕಾರ್ಯ. ನರೇಗಾ ಕೂಲಿಕಾರರು ಮತ ಚಲಾಯಿಸುವ ಮೂಲಕ ತಮ್ಮಿಂದ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದು ತಾಪಂ ಸಹಾಯಕ ನಿರ್ದೇಶಕರಾದ ಹನಮಂತಗೌಡ ಪೊಲೀಸ್ ಪಾಟೀಲ್ ಅವರು ಹೇಳಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಯಲಬುರ್ಗಾ ತಾಲೂಕಿನ ಗೆದಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಜಾಗೃತಿ ಹಾಗೂ ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೇ 07 ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆಗೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ನಾವು ಸಮಯ ವ್ಯರ್ಥ ಮಾಡದೆ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಮತ ಚಲಾಯಿಸಬೇಕು. ಗೆದಗೇರಿ ಗ್ರಾಮ ಪಂಚಾಯತಿಯಲ್ಲಿ ಶೇ. 100 ರಷ್ಟು ಮತದಾನ ಆಗಬೇಕು ಎಂದರು.

ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನವು ಎರಡು ತಿಂಗಳು ನಿರಂತರವಾಗಿದ್ದು, ಅದರ ಸದುಪಯೋಗವನ್ನು ಎಲ್ಲ ಕೂಲಿಕಾರರು ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ತಾ.ಪಂ ತಾಂತ್ರಿಕ ಸಂಯೋಜಕರಾದ ಸಂತೋಷ ನಂದಾಪುರ, ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ, ಗ್ರಾಮ ಪಂಚಾಯತಿ ಪಿಡಿಒ ಮಹಾಂತೇಶ ಬಾಳಿಕಾಯಿ ಗ್ರಾ.ಪಂ ಕಾರ್ಯದರ್ಶಿ ಚನ್ನಪ್ಪ, ಟಿಎಇ ಶ್ರೀದೇವಿ, ಬಿಎಫ್ ಟಿ ದೇವಪ್ಪ ಬತ್ತಿ, ಕಾಯಕ ಮಿತ್ರರಾದ ಮಂಜುಳಾ ತಳವಾರ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!