9aca9d10-b474-4dda-a3f3-a40f105fc831

ಜಿಂದಾಲ್ ತ್ಯಾಜ್ಯ ನೀರು ಹಳ್ಳದ ಮೂಲಕ ದರೋಜಿ ಕೆರೆಗೆ ;

ಜಿಂದಾಲ್ ವಿರುದ್ಧ ಕ್ರಮಕ್ಕೆ ಆಗ್ರಹ

ಕರುನಾಡ ಬೆಳಗು ಸುದ್ದಿ

ಬೆಂಗಳೂರು, ಜುಲೈ. 16, – ಬಳ್ಳಾರಿ ಜಿಲ್ಲೆಯ ತೋರಣಗಲ್ಲುನ ಕಾಣಿಗನಹಳ್ಳದ ಮೂಲಕ ದರೋಜಿ ಕೆರೆಯನ್ನು ಸೇರುತ್ತಿರುವ ರಸಾಯನಿಕ ನೀರಿನ ಕಾರಣ ಕೆರೆಯ ನೀರು ಮಲಿನಗೊಂಡು ಜಲಚರಗಳು ಸಾಯುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುತ್ತಿದ್ದು, ತಕ್ಷಣವೇ ಈ ನೀರನ್ನು ತಡೆಯಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಆಗ್ರಹಿಸಿದ್ದಾರೆ.

ವಿಧಾನಪರಿಷತ್‍ನಲ್ಲಿ ವಿಷಯ ಪ್ರಸ್ತಾಪ ಮಾಡಿದಾಗ, ಉತ್ತರಿಸಿದ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ಅವರು, ಜಿಂದಾಲ್ ಕಂಪನಿಯು ರಸಾಯನಿಕ ಮಿಶ್ರಿತ (ಕೆಮಿಕಲ್ ಮಿಶ್ರಿತ) ನೀರನ್ನು ಸಂಸ್ಕರಿಸದೇ ಕಾಣಿಗನ ಹಳ್ಳದ ಮೂಲಕ ದರೋಜಿ ಕೆರೆಗೆ ಬಿಡುತ್ತಿರುವ ಕುರಿತು ಸಾಕಷ್ಟು ದೂರುಗಳು ಬಂದಿವೆ. ಈ ಕುರಿತು ಸರ್ಕಾರ ತಕ್ಷಣವೇ ಕ್ರಮಕೈಗೊಳ್ಳಲು ನೋಟೀಸ್ ಜಾರಿ ಮಾಡಿದ್ದು, ತಕ್ಷಣವೇ ಕ್ರಮಕೈಗೊಳ್ಳಲು ಆದೇಶ ನೀಡಲಾಗಿತ್ತು.

ನೋಟೀಸ್‍ಗೆ ಸ್ಪಂದಿಸಿರುವ ಜಿಂದಾಲ್ ಕಂಪನಿಯು 9000 ಕ್ಯೂಬಿಕ್ ಮೀಟರ್ ಪ್ರಮಾಣದ ನೀರು ಸಂಸ್ಕøಣಾ ಘಟಕವನ್ನು ಅಳವಡಿಸಿಕೊಂಡಿದೆ. ಅಲ್ಲದೇ, ರಸಾಯನಿಕಯುಕ್ತ ನೀರನ್ನು ಕಾಣಿಗಹಳ್ಳದ ಮೂಲಕ ಹರಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ದರೋಜಿ ಕೆರೆ ಮತ್ತು ಕಾಣಿಗನಹಳ್ಳದಲ್ಲಿ ಹರಿಯುವ ನೀರನ್ನು ಪ್ರತೀ ಮೂರು ತಿಂಗಳಿಗೊಮ್ಮೆ ಪರೀಕ್ಷಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!