
ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,19- 2024-25 ನೇ ಸಾಲಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶವನ್ನು ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಪ್ರತಿ ಶಾಲೆಯಲ್ಲಿ ದಾಖಲಾತಿ 60 ಸೀಟುಗಳು ಮಾತ್ರ ಇದ್ದು, ಪೋಷಕರು/ವಿದ್ಯಾರ್ಥಿಗಳು ನೇರವಾಗಿ ಎಲ್ಲಾ ದಾಖಲೆಗಳೊಂದಿಗೆ ಆಯಾ ಮೌಲಾನಾ ಆಜಾದ್ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಂಪರ್ಕಿಸಿ ಏಪ್ರಿಲ್ 16 ರೊಳಗೆ ಅರ್ಜಿ ಸಲ್ಲಿಸಬೇಕು.
ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಸರ್ದಾರಗಲ್ಲಿ, ಕೊಪ್ಪಳ – 9900617290, ದಿಡ್ಡಿಕೇರಾ ಓಣಿ, ಕೊಪ್ಪಳ-9900617290, ಮುನಿರಾಬಾದ್ – 9902168996, ಲಕ್ಷಿö್ಮÃ ಕ್ಯಾಂಪ್, ಗಂಗಾವತಿ – 9880026927, ಕನಕಗಿರಿ- 9611024212, ಕಾರಟಗಿ – 8073548574, ತಾವರಗೇರಾ – 8746812318, ಯಲಬುರ್ಗಾ – 6363331628, ಕುಕನೂರು – 7829041942 ಶಾಲೆಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಡಾ||ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಶೇ.75 ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅಲ್ಪಸಂಖ್ಯಾತರ ವರ್ಗದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳ 2ಎ, 3ಎ ಮತ್ತು 3ಬಿ ಅಭ್ಯರ್ಥಿಗಳ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಅಂಗವಿಕಲ ವಿದ್ಯಾರ್ಥಿಗಳಿಗೆ ಶೇ.05, ಮಾಜಿ ಸೈನಿಕರಿಗೆ ಶೇ. 04 ಕಾಯ್ದಿರಿಸಲಾಗಿದೆ. ವಿಶೇಷ ದುರ್ಬಲ ವರ್ಗ ಶೇ.05, ಸಫಾಯಿ ಕರ್ಮಚಾರಿ ವಿದ್ಯಾರ್ಥಿಗಳಿಗೆ ಶೇ. 05 ಕಾಯ್ದಿರಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹತ್ತಿರದ ಮೌಲಾನಾ ಆಜಾದ್ ಮಾದರಿ ಶಾಲೆ/ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಅಥವಾ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ದೂ.ಸಂ: 08539-225070 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.